1. Home
  2. Accident
  3. News
  4. ಬಂಟ್ವಾಳದ ಮಣಿಹಳ್ಳದಲ್ಲಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಅಪಘಾತ – ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಮೃತ್ಯು, ನಾಲ್ವರಿಗೆ ಗಾಯ

ಬಂಟ್ವಾಳದ ಮಣಿಹಳ್ಳದಲ್ಲಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಅಪಘಾತ – ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಮೃತ್ಯು, ನಾಲ್ವರಿಗೆ ಗಾಯ

ಬಂಟ್ವಾಳದ ಮಣಿಹಳ್ಳದಲ್ಲಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಅಪಘಾತ – ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಮೃತ್ಯು, ನಾಲ್ವರಿಗೆ ಗಾಯ
0

ನ್ಯೂಸ್ ಆ್ಯರೋ‌ : ಎರಡು ಕಾರು ಹಾಗೂ ಒಂದು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳದಲ್ಲಿ ನಡೆದಿದ್ದು, ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಅವರು ಗಂಭೀರ ಗಾಯಗೊಂಡಿದ್ದು, ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ಮಾಹಿತಿ ಲಭಿಸಿದೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ತೆರಳುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ವಿಟ್ಲದ ಮೆಸ್ಕಾಂ ಎ.ಇ.ಪ್ರವೀಣ್ ಜೋಶಿ ರವರ ಕಾರುಗಳ ನಡುವೆ ಈ ಭೀಕರ ಅಪಘಾತ ನಡೆದಿದೆ. ಬಳಿಕ ಹಿಂಬದಿಯಿಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಪ್ರವೀಣ್ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಲುಕ್ಕಿದ್ದ ಅವರನ್ನು ಹೊರತೆಗೆಯಲು ಸಾರ್ವಜನಿಕರು ಹರಸಾಹಸ ಪಡೆಯಬೇಕಾಯಿತು.

112 ಹೊಯ್ಸಳ ಪೋಲೀಸ್ ವಾಹನ ಚಾಲಕ ವಿಶ್ವನಾಥ ಅವರು ಗಾಯಳು ಜೋಶಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸೇರಿಸಲಾಯಿತು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..