1. Home
  2. Bantwal
  3. ವಿಟ್ಲ : ಪುಣಚ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ಮೃತದೇಹ ಪತ್ತೆ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ..!!

ವಿಟ್ಲ : ಪುಣಚ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ಮೃತದೇಹ ಪತ್ತೆ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ..!!

ವಿಟ್ಲ : ಪುಣಚ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ಮೃತದೇಹ ಪತ್ತೆ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ..!!
0

ನ್ಯೂಸ್ ಆ್ಯರೋ : ವಿಟ್ಲ‌ ಸಮೀಪದ ಪುಣಚ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ಶವ ಪತ್ತೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿದೆ.

ಮೃತರನ್ನು ಮೊಟ್ಟೆತ್ತಡ್ಕ-ಕೆದುಮೂಲೆ ನಿವಾಸಿ ದಿವಂಗತ ವೀರಪ್ಪ ಅವರ ಪುತ್ರ ಕಮಲಾಕ್ಷ (32) ಎಂದು ಗುರುತಿಸಲಾಗಿದೆ.

ಮೃತ ಕಮಲಾಕ್ಷ ಕಳೆದ ಅಕ್ಟೋಬರ್ 25 ರಂದು ಮೈಸೂರಿಗೆ ಕೆಲಸದ ನಿಮಿತ್ತ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಕಮಲಾಕ್ಷ ಅವರ ತಾಯಿ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಅಕ್ಟೋಬರ್ 25 ರ ನಂತರ ಕಮಲಾಕ್ಷ ತಮ್ಮನ್ನು ಸಂಪರ್ಕಿಸಿಲ್ಲ ಮತ್ತು ಅವರ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ನೆಲ್ಲಿಗುಡ್ಡೆಯ ಜರಿಮೂಲೆಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ವ್ಯಕ್ತಿಯ ಶವವನ್ನು ಗ್ರಾಮಸ್ಥರು ಪತ್ತೆ ಮಾಡಿದ್ದರು. ಮರಕ್ಕೆ ನೇತಾಡುತ್ತಿದ್ದ ಹಗ್ಗವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಮೃತರ ತಾಯಿ ಮತ್ತು ಸಹೋದರಿ ಕಮಲಾಕ್ಷ ಅವರ ವಸ್ತುಗಳನ್ನು ಗುರುತಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..