ನ್ಯೂಸ್ ಆ್ಯರೋ : ಅಪೆ ರಿಕ್ಷಾ ಒಂದರಲ್ಲಿ ಅಕ್ರಮವಾಗಿ ದನ ಸಾಗಿಸುತ್ತಿದ್ದ ಆರೋಪಿಗಳನ್ನು ಭಜರಂಗದಳ ಕಲ್ಲಡ್ಕ ಸಜಿಪ ಪ್ರಖಂಡದ ಕಾರ್ಯಕರ್ತರು ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮ್ಯಾಕ್ಸಿಂ ಹಾಗೂ ವಿಶ್ವನಾಥ ಬಾಳ್ತಿಲ ಎಂಬವರು ಆರೋಪಿಗಳಾಗಿದ್ದು, ಪೋಲಿಸರು ಬಂಧಿಸಿದ್ದಾರೆ.
ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ಪಿಕಪ್ ವಾಹನದಲ್ಲಿ ದನವೊಂದನ್ನು ಮಾಂಸ ಮಾಡುವ ಉದ್ದೇಶದಿಂದ ಅಪೆ ರಿಕ್ಷಾದಲ್ಲಿ ಸಾಗಿಸುವ ವೇಳೆ ದಾಳಿ ನಡೆಸಿದ ಭಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ.
ಬಳಿಕ ಆರೋಪಿಗಳನ್ನು ಹಿಡಿದು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಒಪ್ಪಿಸಿದ್ದು, ಗೋ ಸಹಿತ ವಾಹನವನ್ನು ಪೋಲಿಸರ ವಶಕ್ಕೆ ಒಪ್ಪಿಸಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..