ನ್ಯೂಸ್ ಆ್ಯರೋ : ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುವೆತ್ಯಾರು ಎಂಬಲ್ಲಿ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಮೃತ ವ್ಯಕ್ತಿ ಮುಂಡಾಜೆ ಗ್ರಾಮದ ಕುಂಟಾಲಪಳಿಕೆ ಮಂಜುಶ್ರೀ ನಗರದ ನಿವಾಸಿ ಅಣ್ಣು ನಲ್ಕೆ (66) ಎಂದು ಗುರುತಿಸಲಾಗಿದೆ.
ಇವರು ಕುವೆತ್ಯಾರು ನಿವಾಸಿ ನವೀನ್ ಎಂಬವರ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ತೋಟದ ಹಳೆಯ ಅಡಿಕೆ ಮರಗಳನ್ನು ನೌಫಾಲ್ ಎಂಬರು ಕಡಿಯುತ್ತಿದ್ದರು. ಈ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಅಣ್ಣು ಅವರ ತಲೆ ಮೇಲೆ ಬಿದ್ದಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತಂದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..