ನ್ಯೂಸ್ ಆ್ಯರೋ : ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನೆರಿಯ ಗ್ರಾಮದ ನಿವಾಸಿಗಳಾದ ಅಬ್ದುಲ್ ಅಜೀಜ್ (55) ಮಹಮ್ಮದ್ ರಫೀಕ್ (39) ಎಂದು ಗುರುತಿಸಲಾಗಿದ್ದು, ಇನ್ನೋರ್ವ ಆರೋಪಿ ಅನ್ವರ್ ತಪ್ಪಿಸಿಕೊಂಡಿದ್ದಾನೆ.
ಆರೋಪಿಗಳು ಪಿಕಪ್ ವಾಹನದಲ್ಲಿ ಮೂರು ಕರುಗಳು ಹಾಗೂ ಮೂರು ದನಗಳು ಸೇರಿದಂತೆ ಆರು ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಪುದುವೆಟ್ಟು ಗ್ರಾಮದ ಬಾಯಿತ್ತಾರ್ ಎಂಬಲ್ಲಿ ವಾಹನ ನಿಲ್ಲಿಸಿ ಪರಿಶೀಲಿಸಿದಾಗ ಅಕ್ರಮ ಜಾನುವಾರು ಸಾಗಾಟ ಕಂಡು ಬಂದಿದೆ.
ಆರೋಪಿಗಳು ಯಾವುದೇ ಪರವಾನಿಗೆಯಿಲ್ಲದೆ ಕಾಯರ್ತಡ್ಕ ನಿವಾಸಿ ಧರ್ಣಪ್ಪ ಗೌಡ ಎಂಬವರಿಂದ ಜಾನುವಾರಗಳನ್ನು ಖರೀದಿಸಿ ಕೊಂದು ಮಾಂಸ ಮಾಡಲೆಂದು ಸಾಗಾಟ ಮಾಡುತ್ತಿದ್ದರು ಎಂಬುದು ಸ್ಪಷ್ಟಗೊಂಡ ಹಿನ್ನಲೆಯಲ್ಲಿ ಪೊಲೀಸರು ವಾಹನವನ್ನು ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ.
ವಶಕ್ಕೆ ಪಡೆದಿರುವ ಜಾನುವಾರುಗಳ ಒಟ್ಟು ಮೌಲ್ಯ 40,000 ಎಂದು ಅಂದಾಜಿಸಲಾಗಿದ್ದು, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..