1. Home
  2. Entertainment
  3. ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ, ನಟ ಪ್ರಮೋದ್ ಶೆಟ್ಟಿ ಸಾಥ್‌ – ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ನಂಟು‌ : ರಿಷಬ್

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ, ನಟ ಪ್ರಮೋದ್ ಶೆಟ್ಟಿ ಸಾಥ್‌ – ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ನಂಟು‌ : ರಿಷಬ್

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ, ನಟ ಪ್ರಮೋದ್ ಶೆಟ್ಟಿ ಸಾಥ್‌ – ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ನಂಟು‌ : ರಿಷಬ್
0

ನ್ಯೂಸ್ ಆ್ಯರೋ‌ : ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಹೇಮಾವತಿ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಇತ್ತೀಚೆಗೆ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ದಂಪತಿಯನ್ನು ಗೌರವಿಸಿ ಅಭಿನಂದಿಸಿದರು. ನಟ ಪ್ರಮೋದ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಿಷಬ್ ಶೆಟ್ಟಿ ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಹಿಂದಿ, ತುಳು ಹಾಗೂ ಇತರ ಭಾಷೆಗಳಲ್ಲಿಯೂ ಸದ್ಯದಲ್ಲಿಯೇ ಕಾಂತಾರ ಪ್ರದರ್ಶನವಾಗಲಿದೆ, ಈ ಬಗ್ಗೆ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದರು.

ಹಾಡಿನ ವಿವಾದದ ಬಗ್ಗೆ ಮಾತನಾಡಿದ ಅವರು ಇದು ಚಲನಚಿತ್ರ ಜನಪ್ರಿಯವಾದಾಗ ಸಾಮಾನ್ಯವಾಗಿದೆ. ಅದಕ್ಕೆ ಉತ್ತರ ಕೊಡುವ ಕಾರ್ಯವನ್ನು ಸಂಗೀತ ನಿರ್ದೇಶಕರು ಮಾಡಲಿದ್ದಾರೆ ಎಂದು ಹೇಳಿದರು. ಸಿನಿಮಾ ತಯಾರಿ ಮೊದಲೇ ಧರ್ಮಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿ, ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ. ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದರು.

ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..