1. Home
  2. Government
  3. Schemes
  4. ಬಡ ಜನರಿಗೆ ಆಶ್ರಯ ಯೋಜನೆಯಡಿ ಸೂರು; ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ

ಬಡ ಜನರಿಗೆ ಆಶ್ರಯ ಯೋಜನೆಯಡಿ ಸೂರು; ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ

ಬಡ ಜನರಿಗೆ ಆಶ್ರಯ ಯೋಜನೆಯಡಿ ಸೂರು; ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ
0

ನ್ಯೂಸ್ ಆ್ಯರೋ‌ : ಕರ್ನಾಟಕ ರಾಜ್ಯ ಸರ್ಕಾರ ವಸತಿ ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಈ ಪೈಕಿ ‘ಮುಖ್ಯಮಂತ್ರಿ ಒಂದು ಲಕ್ಷ ವಸತಿ ಯೋಜನೆ’ ಪ್ರಮುಖವಾದುದು. ಈ ಯೋಜನೆಯ ಫಲಾನುಭವಿಗಳ ಪಟ್ಟಿ, ಅರ್ಜಿ ಸಲ್ಲಿಕೆ ವಿಧಾನ ಅಥವಾ ಅರ್ಜಿಯ ಸ್ಟೇಟಸ್ ಚೆಕ್‌ ಮಾಡುವುದು ಹೇಗೆ ಎಂಬ ಪೂರ್ಣ ಮಾಹಿತಿ ಇಲ್ಲಿದೆ.

ಮುಖ್ಯಮಂತ್ರಿ ಒಂದು ಲಕ್ಷ ವಸತಿ ಯೋಜನೆಯನ್ನು ರಾಜೀವ್ ಗಾಂಧಿ ರೂರಲ್ ಹೌಸಿಂಗ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆ ಅನುಷ್ಠಾನಕ್ಕೆ ತರುತ್ತಿದೆ. ‘ಮುಖ್ಯಮಂತ್ರಿ ಒಂದು ಲಕ್ಷ ವಸತಿ ಯೋಜನೆ’ಯ ಫಲಾನುಭವಿಗಳ ಪಟ್ಟಿಯನ್ನು ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ashraya.karnataka.gov.in ತಿಳಿಯಬಹುದು.

ಈ ಯೋಜನೆಯ ಮುಖ್ಯ ಉದ್ದೇಶ ಅಗ್ಗದ ದರದಲ್ಲಿ ಒಂದು ಲಕ್ಷ ಮನೆಗಳನ್ನು ಬಿಪಿಎಲ್ ಕುಟುಂಬಗಳಿಗೆ ಒದಗಿಸುವುದಾಗಿದೆ.

ಅರ್ಹತೆ ಏನು?

  • ಕರ್ನಾಟಕದ ನಾಗರಿಕರಿಗೆ ಮಾತ್ರ ಯೋಜನೆ ಅನ್ವಯವಾಗುತ್ತದೆ.
  • ಬಿಪಿಎಲ್ ಕುಟುಂಬಗಳು ಅರ್ಹರು.
  • ಕುಟುಂಬಗಳ ವಾರ್ಷಿಕ ಆದಾಯ ರೂ. 87,000 ಕ್ಕಿಂತ ಕಡಿಮೆ ಇರಬೇಕು.
  • ಅರ್ಜಿದಾರ ಬೆಂಗಳೂರಿನಲ್ಲಿ ಕನಿಷ್ಟ ಐದು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳಿಂದ ವಾಸವಾಗಿರಬೇಕು.
  • ಅರ್ಜಿದಾರನಿಗೆ ಸ್ವಂತ ಮನೆ ಇದ್ದಿರಬಾರದು.
  • ಅರ್ಜಿದಾರ ಬೇರೆ ಯಾವುದೇ ಯೋಜನೆಗಳಡಿ ಪ್ರಯೋಜನ ಪಡೆದಿರಬಾರದು.

ಈ ದಾಖಲೆಗಳು ಅಗತ್ಯ

  • ವಾಸಸ್ಥಳ ಪ್ರಮಾಣ ಪತ್ರ (ಐದು ವರ್ಷಗಳಿಂದ ವಾಸವಾಗಿರುವ ಕುರಿತು)
  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ

ಅರ್ಜಿ ಸಲ್ಲಿಕೆ ಹೇಗೆ?

ರಾಜ್ಯ ಸರ್ಕಾರದ ಮುಖ್ಯಮಂತ್ರಿ 1 ಲಕ್ಷ ವಸತಿ ಯೋಜನೆಯ ಫಲಾನುಭವಿಯಾಗಲು ಬಯಸುವವರು ಅಧಿಕೃತ ವೆಬ್‌ಸೈಟ್‌ (ashraya.karnataka.gov.in) ಮೂಲಕ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ (rajiv gandhi rural housing corporation limited) ಅರ್ಜಿ ಸಲ್ಲಿಕೆಗೆ ಹೆಚ್ಚಿನ ಮಾಹಿತಿ, ಮಾರ್ಗದರ್ಶಿಯನ್ನು ಒದಗಿಸುತ್ತದೆ. ಅರ್ಜಿದಾರರು ನೋಂದಣಿ ಮಾಡಿ ಲಾಗಿನ್ ಆಗಬೇಕು. ನಂತರ ಅರ್ಜಿಯನ್ನು ತುಂಬಿ ಅಗತ್ಯ ದಾಖಲಾತಿಗಳೊಂದಿಗೆ ಅಪ್ಲೋಡ್ ಮಾಡಬೆಕಾಗುತ್ತದೆ.

ಆನ್ಲೈನ್ ಸ್ಟೇಟಸ್ ಚೆಕ್ ಮಾಡೋದು ಹೇಗೆ?

ಮುಖ್ಯಮಂತ್ರಿ 1 ಲಕ್ಷ ವಸತಿ ಯೋಜನೆ ಬೆಂಗಳೂರು, ಇದರ ಆನ್ಲೈನ್ ಸ್ಟೇಟಸ್ ಚೆಕ್ ಮಾಡಲು ಈ ಹಂತಗಳನ್ನು ಅನುಸರಿಸಿ.

  • ಹಂತ 1: https://ashraya.karnataka.gov.in/Static/BeneficiaryStatusNew.aspx ಈ ಲಿಂಕ್‌ ಕ್ಲಿಕ್ ಮಾಡುವ ಮೂಲಕ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಪುಟ ತೆರೆಯಿರಿ
  • ಹಂತ 2 : ನಿಮ್ಮ ಜಿಲ್ಲೆ ಹಾಗು ಫಲಾನುಭವಿ ಕೋಡ್ ನಮೂದಿಸಿ.
  • ಹಂತ 3 : ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..