1. Home
  2. Kadaba
  3. ಕಡಬ : ಕುಡಿದ ಮತ್ತಿನಲ್ಲಿ ಇಬ್ಬರು ದುಷ್ಕರ್ಮಿಗಳಿಂದ ವ್ಯಕ್ತಿಗೆ ಚೂರಿ ಇರಿತ – ಗಾಯಾಳು ಆಸ್ಪತ್ರೆಗೆ ದಾಖಲು, ಆರೋಪಿಗಳು ಪರಾರಿ

ಕಡಬ : ಕುಡಿದ ಮತ್ತಿನಲ್ಲಿ ಇಬ್ಬರು ದುಷ್ಕರ್ಮಿಗಳಿಂದ ವ್ಯಕ್ತಿಗೆ ಚೂರಿ ಇರಿತ – ಗಾಯಾಳು ಆಸ್ಪತ್ರೆಗೆ ದಾಖಲು, ಆರೋಪಿಗಳು ಪರಾರಿ

ಕಡಬ : ಕುಡಿದ ಮತ್ತಿನಲ್ಲಿ ಇಬ್ಬರು ದುಷ್ಕರ್ಮಿಗಳಿಂದ ವ್ಯಕ್ತಿಗೆ ಚೂರಿ ಇರಿತ – ಗಾಯಾಳು ಆಸ್ಪತ್ರೆಗೆ ದಾಖಲು, ಆರೋಪಿಗಳು ಪರಾರಿ
0

ನ್ಯೂಸ್ ಆ್ಯರೋ‌ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನೂಜಿ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಲೋಕೇಶ್ ರಾಣ್ಯ ಎಂಬವರ ಬೆನ್ನು ಮತ್ತು ಕೈಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಕಡಬ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನೂಜಿ ನಿವಾಸಿ ಕುಶಲ ಮತ್ತು ಹರೀಶ ಚೂರಿಯಿಂದ ಇರಿದ ದುಷ್ಕರ್ಮಿಗಳು.

ಘಟನೆ ನಡೆದ ಸ್ಥಳಕ್ಕೆ ಹೈವೇ ಪ್ಯಾಟ್ರೋಲ್ ಪೊಲೀಸರು ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ. ಘಟನೆಯ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಪತ್ತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ.

ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ತಿಳಿದು ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..