1. Home
  2. Kadaba
  3. ಸುಬ್ರಹ್ಮಣ್ಯ : ಹೃದಯಾಘಾತದಿಂದ ಪಿಡಿಒ ದುರ್ಮರಣ

ಸುಬ್ರಹ್ಮಣ್ಯ : ಹೃದಯಾಘಾತದಿಂದ ಪಿಡಿಒ ದುರ್ಮರಣ

ಸುಬ್ರಹ್ಮಣ್ಯ : ಹೃದಯಾಘಾತದಿಂದ ಪಿಡಿಒ ದುರ್ಮರಣ
0

ನ್ಯೂಸ್ ಆ್ಯರೋ‌ : ಕಡಬ ತಾಲೂಕಿನ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಶೇಖರ್ ಅವರು ಇಂದು ಮುಂಜಾನೆ ಮನೆಯಲ್ಲಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಕೂಡಲೇ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತರಲಾಗಿತ್ತು.

ಆದರೆ ಆ ವೇಳೆಗಾಗಲೇ ಸಮಯ ಮೀರಿದ್ದು, ಅವರು ಮೃತಪಟ್ಟಿರುವದಾಗಿ ವೈದ್ಯರು ಘೋಷಿಸಿದ್ದಾರೆ. ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆಯಾಗಿದ್ದರು.

ಮೃತ ಶೇಖರ್ ಅವರ ಗೀತಾ ಅವರು ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದು, ಶೇಖರ್ ಅವರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..