ನ್ಯೂಸ್ ಆ್ಯರೋ : ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ಕಳೆದ ತಡ ರಾತ್ರಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕೊಡಿಯಾಲ ಗ್ರಾಮದ ಗುತ್ತಿನಮನೆ ನಿವಾಸಿ ನಾರಾಯಣ (43) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಇನ್ನೊಂದು ಬೈಕ್ ನಲ್ಲಿದ್ದ ಸುಜಿತ್ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಸುಳ್ಯ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೃಥ್ವಿರಾಜ್ ಎಂಬವರು ಪೋಲಿಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾಧಿಕಾರಿ ಸುಹಾಸ್ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..