1. Home
  2. Mangaluru
  3. ಮಂಗಳೂರು : ಸುರತ್ಕಲ್ ನಲ್ಲಿ ಜಲೀಲ್ ಕೊಲೆ ಹಿನ್ನೆಲೆ – ಸುರತ್ಕಲ್, ಬಜಪೆ, ಕಾವೂರು, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ 2 ದಿನಗಳ 144 ಸೆಕ್ಷನ್ ಜಾರಿ, ಮದ್ಯ ಮಾರಾಟವೂ ನಿಷೇಧ

ಮಂಗಳೂರು : ಸುರತ್ಕಲ್ ನಲ್ಲಿ ಜಲೀಲ್ ಕೊಲೆ ಹಿನ್ನೆಲೆ – ಸುರತ್ಕಲ್, ಬಜಪೆ, ಕಾವೂರು, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ 2 ದಿನಗಳ 144 ಸೆಕ್ಷನ್ ಜಾರಿ, ಮದ್ಯ ಮಾರಾಟವೂ ನಿಷೇಧ

ಮಂಗಳೂರು : ಸುರತ್ಕಲ್ ನಲ್ಲಿ ಜಲೀಲ್ ಕೊಲೆ ಹಿನ್ನೆಲೆ – ಸುರತ್ಕಲ್, ಬಜಪೆ, ಕಾವೂರು, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ 2 ದಿನಗಳ 144 ಸೆಕ್ಷನ್ ಜಾರಿ, ಮದ್ಯ ಮಾರಾಟವೂ ನಿಷೇಧ
0

ನ್ಯೂಸ್ ಆ್ಯರೋ : ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಂಗಡಿ ಮಾಲೀಕ ಜಲೀಲ್ ಅವರ ಕೊಲೆ ಹಿನ್ನೆಲೆಯಲ್ಲಿ ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಈ ಬಗ್ಗೆ ಮಂಗಳೂರು ನಗರ ಕಮೀಷನರ್ ಆದೇಶ ಹೊರಡಿಸಿದ್ದು, ಡಿಸೆಂಬರ್ 25ರ ಬೆಳಿಗ್ಗೆ 6ರಿಂದ ಡಿಸೆಂಬರ್ 27ರ ಬೆಳಿಗ್ಗೆ 6 ಗಂಟೆಯವರೆಗೆ ನಾಲ್ಕೂ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ‌.

ಹಾಗೆಯೇ ರಾತ್ರಿ ವೇಳೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕಿಡಿಗೇಡಿಗಳು ತೊಂದರೆ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ದಿನಾಂಕ: 25-12-2022 ಮತ್ತು ದಿನಾಂಕ: 26-12-2022 ರಂದು ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ನ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳ ಕರ್ತವ್ಯದ ಪಾಳಿಯನ್ನು ಸಂಜೆ 6-00 ಗಂಟೆಯ ಒಳಗಾಗಿ ಬದಲಾಯಿಸುವಂತೆ ಹಾಗೂ ಸಂಜೆ 6-00 ಗಂಟೆಯಿಂದ ಬೆಳಿಗ್ಗೆ 6-00 ಗಂಟೆಯವರೆಗೆ ಸಿಬ್ಬಂದಿಯವರು ರಸ್ತೆಗಳಲ್ಲಿ ಸಂಚರಿಸದಂತೆ ಸಂಸ್ಥೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.

ಹಾಗೆಯೇ ಸುರತ್ಕಲ್, ಬಜಪೆ, ಕಾವೂರು, ಪಣಂಬೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 25 ರ ಬೆಳಿಗ್ಗೆ 10 ಗಂಟೆಯಿಂದ 27 ರ ಬೆಳಿಗ್ಗೆ 10 ಗಂಟೆಯವರೆಗೆ ಮದ್ಯ ನಿಷೇಧ ಮಾಡಲಾಗಿದ್ದು, ಎಲ್ಲಾ ಮದ್ಯ ಮಾರಾಟ ಮಳಿಗೆಗಳು, ಬಾರ್ ಹಾಗೂ ವೈನ್ಸ್ ಗಳು ಎರಡು ದಿನಗಳ ಕಾಲ ಬಂದ್ ಆಗಲಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..