1. Home
  2. Mangaluru
  3. ಮಂಗಳೂರು : ಕೋಟೆಕಾರ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಉಳ್ಳಾಲ ಪೋಲಿಸರು – ನೊಂದ ಯುವತಿಯರ ರಕ್ಷಣೆ, ನಾಲ್ವರು ಆರೋಪಿಗಳ ಬಂಧನ

ಮಂಗಳೂರು : ಕೋಟೆಕಾರ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಉಳ್ಳಾಲ ಪೋಲಿಸರು – ನೊಂದ ಯುವತಿಯರ ರಕ್ಷಣೆ, ನಾಲ್ವರು ಆರೋಪಿಗಳ ಬಂಧನ

ಮಂಗಳೂರು : ಕೋಟೆಕಾರ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಉಳ್ಳಾಲ ಪೋಲಿಸರು – ನೊಂದ ಯುವತಿಯರ ರಕ್ಷಣೆ, ನಾಲ್ವರು ಆರೋಪಿಗಳ ಬಂಧನ
0

ನ್ಯೂಸ್ ಆ್ಯರೋ : ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದು, ಮಾಂಸ ಧಂದೆಯ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನು ಬಂಧಿಸಿದ್ದಾರೆ.

ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಅವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಮೊಹಮ್ಮದ್ ಇಕ್ಬಾಲ್ ಈ ಪ್ರಕರಣದ ಮುಖ್ಯ ಆರೋಪಿ ಆಗಿದ್ದು ಈತ ಈ ಹಿಂದೆ ಪಿಲಾರು, ಕಾಪಿಕಾಡ್ ಪ್ರದೇಶಗಳಲ್ಲೂ ಬಾಡಿಗೆ ಮನೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ.

ಅಲ್ಲದೆ ನೆರೆ ಹೊರೆಯವರಲ್ಲಿ ತಾನು ಶಾಸಕರೋರ್ವರ ಸಂಬಂಧಿ ಎಂದೂ ಬೋಂಗು ಬಿಡುತ್ತಿದ್ದ. ಇವರಿಗೆ ಶರ್ಫುದ್ದೀನ್ ಎಂಬಾತ ವೇಶ್ಯೆಯರನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.

ಇರ್ಶಾದ್ ಅಡ್ಯನಡ್ಕ ಇವರಿಗೆ ಗಿರಾಕಿ ಆಗಿದ್ದು ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ನಿನ್ನೆ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದು ನೊಂದ ಯುವತಿಯರನ್ನ ರಕ್ಷಿಸಿದ್ದಾರೆ.