1. Home
  2. Mangaluru
  3. ಕೊಣಾಜೆ‌ : ಪಳ್ಳಿಯಬ್ಬ ಕೊಲೆ ಪ್ರಕರಣ – ನಾಲ್ವರು ಆರೋಪಿಗಳ‌ ಮೇಲಿನ ಆರೋಪ ಸಾಬೀತು

ಕೊಣಾಜೆ‌ : ಪಳ್ಳಿಯಬ್ಬ ಕೊಲೆ ಪ್ರಕರಣ – ನಾಲ್ವರು ಆರೋಪಿಗಳ‌ ಮೇಲಿನ ಆರೋಪ ಸಾಬೀತು

ಕೊಣಾಜೆ‌ : ಪಳ್ಳಿಯಬ್ಬ ಕೊಲೆ ಪ್ರಕರಣ – ನಾಲ್ವರು ಆರೋಪಿಗಳ‌ ಮೇಲಿನ ಆರೋಪ ಸಾಬೀತು
0

ನ್ಯೂಸ್ ಆ್ಯರೋ‌ : ಮಂಗಳೂರು ನಗರ ಕಮೀಷನರೇಟ್ ನ ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದ ಐವರ ಮೇಲಿನ ಆರೋಪವು ಸಾಬೀತಾಗಿದೆ.

ಐವರು ಆರೋಪಿಗಳು ಕೂಡ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸಪ್ಪಬಾಳಪ್ಪ ಜಕಾತಿ ಘೋಷಿಸಿದ್ದು ಅವರು ಶಿಕ್ಷೆಯ ಪ್ರಮಾಣವನ್ನು ಮಾ.3ರಂದು ನೀಡುವುದಾಗಿ ಪ್ರಕಟಿಸಿದ್ದಾರೆ.

ಮಲಾರ್ ಅಕ್ಷರ ನಗರ ನಿವಾಸಿಗಳಾದ ಹಂಝ (44), ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಅಥಾವುಲ್ಲ ಯಾನೆ ಅಲ್ತಾಫ್ ಅವರ ಮೇಲಿನ ಆರೋಪವು ಸಾಬೀತಾಗಿದೆ.

ಏನಿದು ಪ್ರಕರಣ?
ಪಾವೂರು ಗ್ರಾಮದ ಮಲಾರ್‌ನ ಪಳ್ಳಿಯಬ್ಬ ಯಾನೆ ಪಳ್ಳಿಯಾಕ (75)ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಹಣದ ವಿಚಾರದಲ್ಲಿ ಇವರನ್ನು ದುಷ್ಕರ್ಮಿಗಳು ಅತ್ಯಂತ ವ್ಯವಸ್ಥಿತವಾಗಿ ಹತ್ಯೆಗೈದು ಹೂತು ಹಾಕಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು. ಈ ಬಗ್ಗೆ ಕೊಣಾಜೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..