1. Home
  2. National
  3. &
  4. International
  5. National
  6. News
  7. ಗುಜರಾತ್‌ ತೂಗು ಸೇತುವೆ ದುರಂತಕ್ಕೆ 141 ಬಲಿ, ಹಲವರು ಕಣ್ಮರೆ – ಪ್ರವಾಸಿಗರ ಹುಚ್ಚಾಟವೇ ದುರ್ಘಟನೆಗೆ ಕಾರಣವಾಯಿತೇ..?

ಗುಜರಾತ್‌ ತೂಗು ಸೇತುವೆ ದುರಂತಕ್ಕೆ 141 ಬಲಿ, ಹಲವರು ಕಣ್ಮರೆ – ಪ್ರವಾಸಿಗರ ಹುಚ್ಚಾಟವೇ ದುರ್ಘಟನೆಗೆ ಕಾರಣವಾಯಿತೇ..?

ಗುಜರಾತ್‌ ತೂಗು ಸೇತುವೆ ದುರಂತಕ್ಕೆ 141 ಬಲಿ, ಹಲವರು ಕಣ್ಮರೆ – ಪ್ರವಾಸಿಗರ ಹುಚ್ಚಾಟವೇ ದುರ್ಘಟನೆಗೆ ಕಾರಣವಾಯಿತೇ..?
0

ನ್ಯೂಸ್ ಆ್ಯರೋ : ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ದುರಂತದಲ್ಲಿ ಇದೀಗ ಸಾವನ್ನಪ್ಪಿದವರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ‌177 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನು ಹಲವು ಮಂದಿ ನಾಪತ್ತೆಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 19 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬದ 12 ಜನರು ಪ್ರಾಣ ಕಳೆದುಕೊಂಡಿದ್ದಾರೆ.

230 ಮೀಟರ್‌ ಉದ್ದದ ಈ ಸೇತುವೆಯನ್ನು 19ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿತ್ತು. ನವೀಕರಣ ಕಾರ್ಯದ ಹಿನ್ನೆಲೆ ಈ ಸೇತುವೆಗೆ ಆರು ತಿಂಗಳು ನಾಗರಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ (ಅಕ್ಟೋಬರ್‌ 26) ಇದು ಸಾರ್ವಜನಿಕರ ಬಳಕೆಗೆ ಮುಕ್ತ ಮಾಡಲಾಗಿದ್ದು, ಇದೀಗ ದೊಡ್ಡ ಅವಘಡ ಸಂಭವಿಸಿದೆ.

ಗುಜರಾತ್ ಸಚಿವ ಬ್ರಿಜೇಶ್ ಮೆರ್ಜಾ ಈ ಸಂಬಂಧ ಪ್ರತಿಕ್ರಿಯಿಸಿ,, ‘ಸೇತುವೆ ನವೀಕರಣಗೊಂಡು ಕೆಲವೇ ದಿನಗಳಲ್ಲಿ ಈ ದುರ್ಘಟನೆ ನಡೆದಿದೆ. ಈ ಸಂಬಂಧ ತನಿಖೆ ಮಾಡಲಾಗುತ್ತಿದ್ದು, ಈ ಅವಘಡದ ಸಂಪೂರ್ಣ ಹೊಣೆಯನ್ನು ಸರ್ಕಾರದ ಮೇಲಿದೆ’ ಎಂದಿದ್ದಾರೆ.

ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ರಪರಿಹಾರ ಹಾಗೂ ಗಾಯಗೊಂಡವರ ಕುಟುಂಬಕ್ಕೆ ₹50 ಪರಿಹಾರವನ್ನು ಘೋಷಣೆ ಮಾಡಿದೆ. ಅದಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಪ್ರವಾಸಿಗರ ಹುಚ್ಚಾಟವೇ ದುರ್ಘಟನೆಗೆ ಕಾರಣ:

ತೂಗು ಸೇತುವೆ ದುರಂತಕ್ಕೆ ಪ್ರವಾಸಿಗರ ಉಡಾಫೆ ವರ್ತನೆ ಹಾಗೂ ಭದ್ರತಾ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಕುಟುಂಬ ಸಮೇತರಾಗಿ ತೂಗು ಸೇತುವೆ ಬಳಿ ಬಂದ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿ, ಪ್ರವಾಸಿಗರು ತೂಗು ಸೇತುವೆಯನ್ನು ಅಲ್ಲಾಡಿಸಿದ್ದರಿಂದ ಈ ದುರ್ಘಟನೆ ನಡೆದಿದೆ. ಮೋರ್ಬಿಯ ತೂಗುಸೇವೆ ನೋಡಲು ನಾವು ಕುಟುಂಬ ಸಮೇತರಾಗಿ ತೆರಳಿದ್ದೆವು. ಸೇತುವೆಯ ಮೇಲೆ ನಿಂತಿದ್ದ ಕೆಲ ಯುವಕರು ಅದನ್ನು ಅಲ್ಲಾಡಿಸುತ್ತಿದ್ದರು. ಭಯದಿಂದ ನಾವು ಸೇತುವೆಯಲ್ಲಿ ಮುಂದೆ ಸಾಗದೆ ವಾಪಾಸ್ ಬಂದೆವು. ನಾವು ಮರಳಿದ ಕೆಲ ಗಂಟೆಗಳಲ್ಲೇ ಈ ಘಟನೆ ನಡೆದಿದೆ ಎಂದಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..