1. Home
  2. National
  3. &
  4. International
  5. National
  6. News
  7. ಜ್ಞಾನವಾಪಿ ಮಸೀದಿಯ ಶಿವಲಿಂಗದ ಕಾರ್ಬನ್ ಪರೀಕ್ಷೆ ನಿರಾಕರಿಸಿದ ನ್ಯಾಯಾಲಯ – ಹಿಂದೂ ಪರ ಹೋರಾಟಗಾರರಿಗೆ ತೀವ್ರ ಹಿನ್ನಡೆ

ಜ್ಞಾನವಾಪಿ ಮಸೀದಿಯ ಶಿವಲಿಂಗದ ಕಾರ್ಬನ್ ಪರೀಕ್ಷೆ ನಿರಾಕರಿಸಿದ ನ್ಯಾಯಾಲಯ – ಹಿಂದೂ ಪರ ಹೋರಾಟಗಾರರಿಗೆ ತೀವ್ರ ಹಿನ್ನಡೆ

ಜ್ಞಾನವಾಪಿ ಮಸೀದಿಯ ಶಿವಲಿಂಗದ ಕಾರ್ಬನ್ ಪರೀಕ್ಷೆ ನಿರಾಕರಿಸಿದ ನ್ಯಾಯಾಲಯ – ಹಿಂದೂ ಪರ ಹೋರಾಟಗಾರರಿಗೆ ತೀವ್ರ ಹಿನ್ನಡೆ
0

ನ್ಯೂಸ್ ಆ್ಯರೋ‌ : ಜ್ಞಾನವಾಪಿ ಮಸೀದಿಯಲ್ಲಿರುವ (Gyanvapi Mosque Case) ಶಿವಲಿಂಗದ ಕಾರ್ಬನ್ ಪರೀಕ್ಷೆಗೆ ಒಪ್ಪಿಗೆ ನೀಡಲು ವಾರಾಣಸಿ ಜಿಲ್ಲಾ ನ್ಯಾಯಾಲಯವು ನಿರಾಕರಿಸಿದೆ. ಈ ಮೂಲಕ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಮತ್ತೊಂದು ಆಯಾಮ ದೊರೆತಿದೆ. ಒಂದೊಮ್ಮೆ ಕಾರ್ಬನ್ ಡೇಟಿಂಗ್‌ಗೆ ಅನುಮತಿ ನೀಡಿದ್ದರೆ, ಶಿವಲಿಂಗ ಎಷ್ಟು ಹಳೆಯದ್ದು ಎಂಬ ಮಾಹಿತಿ ಗೊತ್ತಾಗುತ್ತಿತ್ತು. ವಾರಾಣಸಿ ಜಿಲ್ಲಾ ಕೋರ್ಟ್ ನ್ಯಾಯಾಧೀಶ ಎ ಕೆ ವಿಶ್ವೇಶ ಅವರು ಈ ಆದೇಶವನ್ನು ನೀಡಿದ್ದಾರೆ. ಕೋರ್ಟ್‌ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಕೋರ್ಟ್‌ರೂಮ್‌ನಲ್ಲಿ ಕೇವಲ 58 ಜನರಿಗಷ್ಟೇ ಅವಕಾಶ ಕಲ್ಪಿಸಲಾಗಿತ್ತು.

ನ್ಯಾಯಾಲಯದ ಆದೇಶದ ಅನ್ವಯ ಮೇ 16ರಂದು ಜ್ಞಾನವಾಪಿ ಮಸೀದಿಯ ಆವರಣದೊಳಗೆ ವಿಡಿಯೊ ಸಮೀಕ್ಷೆ ನಡೆಸಲಾಗಿತ್ತು. ಮುಸ್ಲಿಮರು ನಮಾಜ್‌ಗೂ ಮುನ್ನ ಬಳಸುತ್ತಿದ್ದ ‘ವಝೂಖಾನ’ ಕೊಳದ ಸಮೀಪ ಶಿವಲಿಂಗದ ಆಕೃತಿ ಪತ್ತೆಯಾಗಿದೆ ಎಂದು ಹಿಂದೂ ಪರ ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದರು. ಆ ಆಕೃತಿಯನ್ನು ಕಾರ್ಬನ್‌ ಡೇಟಿಂಗ್‌ಗೆ ಒಳಪಡಿಸಬೇಕು ಎಂದು ಜ್ಞಾನವಾಪಿ- ಶೃಂಗಾರ ಗೌರಿ ಮೊಕದ್ದಮೆಯ ಹಿಂದೂ ಪರ ಅರ್ಜಿದಾರರು ಮನವಿ ಮಾಡಿದ್ದರು.

ವಿಡಿಯೋ ಸಮೀಕ್ಷೆಯಲ್ಲಿ ಕಂಡುಬಂದಿರುವ ಆಕೃತಿಯು ಕಾರಂಜಿಯ ಮೂಲ ಎಂದು ಮಸೀದಿ ಆಡಳಿತವು ಲಿಖಿತ ಹೇಳಿಕೆ ನೀಡಿತ್ತು. ಈ ಅರ್ಜಿಗಳ ಮೇಲಿನ ವಾದಗಳು ಮಂಗಳವಾರ ಪೂರ್ಣಗೊಂಡಿದ್ದವು. ನ್ಯಾಯಾಲಯವು ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು.

ಮುಸ್ಲಿಂ ಪರ ವಕೀಲ ಮುಮ್ತಾಜ್ ಅಹ್ಮದ್ ಅವರು ‘ಯಾವುದೇ ವಸ್ತುವಿನ ಕಾರ್ಬನ್ ಡೇಟಿಂಗ್ ಮಾಡಲು ಸಾಧ್ಯವಿಲ್ಲ. ಕಾರ್ಬನ್ ಡೇಟಿಂಗ್ ಹೆಸರಿನಲ್ಲಿ ವಸ್ತು ಹಾನಿಗೊಳಗಾದರೆ, ಅದು ಸುಪ್ರೀಂ ಕೋರ್ಟ್‌ನ ಆದೇಶವನ್ನು ಧಿಕ್ಕರಿಸಿದಂತೆ ಆಗುತ್ತದೆ’ ಎಂದು ಪ್ರತಿಪಾದಿಸಿದ್ದರು.

ಯಾವುದೇ ವಸ್ತುವಿನ ಪ್ರಾಚೀನತೆಯನ್ನು ಕಂಡು ಹಿಡಿಯುವ ವೈಜ್ಞಾನಿಕ ಪರೀಕ್ಷೆಯಾಗಿದೆ. ಪುರಾತತ್ವ ಶಾಸ್ತ್ರ ಸಂಶೋಧನೆಗಳ ವೇಳೆ ಈ ಕಾರ್ಬನ್ ಡೇಟಿಂಗ್ ಪರೀಕ್ಷೆ ಮಹತ್ವದ್ದಾಗಿರುತ್ತದೆ. ಯಾವುದೇ ಪಳಯುಳಿಕೆಗಳು, ಇನ್ನಿತರ ವಸ್ತುಗಳು ದೊರೆತಾಗ ಅವು ಎಷ್ಟು ವರ್ಷ ಹಿಂದಿನದು ಎಂಬುದನ್ನು ಪತ್ತೆ ಹಚ್ಚಲು ಕಾರ್ಬನ್ ಡೇಟಿಂಗ್ ಕ್ರಮ ಅನುಸರಿಸಲಾಗುತ್ತದೆ.

ವಾರಾಣಸಿಯ ವಿಶ್ವನಾಥ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಇರುವ ಜ್ಞಾನವಾಪಿ ಮಸೀದಿಯ ಪಶ್ಚಿಮ ಗೋಡೆಯಲ್ಲಿ ದೇವರ ಚಿತ್ರಗಳಿವೆ. ಅವುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ಐವರು ಮಹಿಳೆಯರು ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಮುಸ್ಲಿಂ ಬಣ ಇದನ್ನು ಪ್ರಶ್ನಿಸಿದೆ. ಐವರು ಹಿಂದೂ ಮಹಿಳೆಯರು ವೈಯಕ್ತಿಕವಾಗಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಗೆ ಕೋರ್ಟ್ ಸಮ್ಮತಿ ಸೂಚಿಸಿತ್ತು. ಇದೀಗ ವಿಚಾರಣೆ ನಡೆಯುತ್ತಿದೆ. ಐವರು ಮಹಿಳೆಯರು ಕೇಸ್‌ ದಾಖಲಿಸಿದ ಬಳಿಕ ಜ್ಞಾನವಾಪಿ ಸಂಕೀರ್ಣದ ವಿಡಿಯೊಗ್ರಾಫಿಕ್‌ ಸರ್ವೇಕ್ಷಣೆಗೆ ಕೋರ್ಟ್‌ ಈ ಹಿಂದೆ ಆದೇಶಿಸಿತ್ತು. ಈ ಸರ್ವೇಕ್ಷಣೆಯ ವೇಳೆ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಬಣ ಹೇಳಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಕಾನೂನು ಹೋರಾಟ ನಡೆಯುತ್ತಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..