1. Home
  2. Top
  3. News
  4. ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ – ಮುಖ್ಯ ರಸ್ತೆಗಳ ಸಂಚಾರ ಬಂದ್ : ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ…

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ – ಮುಖ್ಯ ರಸ್ತೆಗಳ ಸಂಚಾರ ಬಂದ್ : ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ…

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ – ಮುಖ್ಯ ರಸ್ತೆಗಳ ಸಂಚಾರ ಬಂದ್ : ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ…
0

ನ್ಯೂಸ್ ಆ್ಯರೋ : ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡುವ ಹಿನ್ನೆಲೆ ಭದ್ರತೆ ದೃಷ್ಟಿಯಿಂದ ಸಾರ್ವಜನಿಕ ಸಂಚಾರಕ್ಕೆ ಬಂದ್ ಇರಲಿದೆ. ಈ ಹಿನ್ನೆಲೆಯಲ್ಲಿ ಕೆಳಕಂಡ ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ.

‌ಯಾವೆಲ್ಲ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಇರಲಿದೆ.

  • 1. ಸಿಟಿಓ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ಸರ್ಕಲ್​ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ ಮತ್ತು ಏರ್ ಪೋರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ ಬಂದ್​ ಇರಲಿದೆ.
  • 2. ಶೇಷಾದ್ರಿ ರಸ್ತೆಯಲ್ಲಿ – ಮಹಾರಾಣಿ ಬ್ರಿಡ್ಜ್ ನಿಂದ – ರೈಲ್ವೆ ಸ್ಟೇಷನ್ ಪ್ರವೇಶ ದ್ವಾರದವರೆಗೆ ಹಾಗೂ
  • 3. ಕೆ.ಜಿ ರಸ್ತೆಯಲ್ಲಿ – ಶಾಂತಲಾ ಜಂಕ್ಷನ್​​ನಿಂದ ಮೈಸೂರು ಬ್ಯಾಂಕ್‌ ಸರ್ಕಲ್ ವರೆಗೆ ಬಂದ್ ಇರಲಿದೆ.
  • 4. ವಾಟಾಳ್ ನಾಗರಾಜ್ ರಸ್ತೆಯಲ್ಲಿ – ಕೋಡೆ ಅಂಡರ್ ಪಾಸ್​​ನಿಂದ ಪಿ.ಎಫ್ ವರೆಗೆ ಹಾಗೂ

ಇಂಟರ್‌ನ್ಯಾಷನಲ್ ಏ‌ಪೋರ್ಟ್‌ನ ಸುತ್ತ ಮತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಇನ್ನೂ ಮೇಲ್ಕಂಡ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಇರುವುದರಿಂದ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

  • ಮೈಸೂರು ಬ್ಯಾಂಕ್‌ ವೃತ್ತದಿಂದ ಪ್ಯಾಲೇಸ್ ರಸ್ತೆಗೆ ಬರುವ ವಾಹನ ಸವಾರರು ಕೆ.ಜಿ. ರಸ್ತೆಯ ಮೂಲಕ ಎಲ್‌.ಆರ್‌.ಡಿ.ಇ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಂಚರಿಸುವವರು ರಾಜಭವನ ರಸ್ತೆ ಮೂಲಕ ಸಾಗಬೇಕು.
  • ಟ್ರಿಲೈಟ್ ಜಂಕ್ಷನ್​ನಿಂದ ಮೌರ್ಯ ಜಂಕ್ಷನ್ ಮೂಲಕ ಬರುವವರು ರೇಸ್‌ ವ್ಯೂವ್ ಸರ್ಕಲ್‌ನಲ್ಲಿ – ಶಿವಾನಂದ ಸರ್ಕಲ್‌ನಲ್ಲಿ ಎಡತಿರುವು ಪಡೆದು ನೆಹರು ಸರ್ಕಲ್ ಮೂಲಕ ಸಾಗಬಹುದಾಗಿದೆ.
  • ಕೆಕೆ ರಸ್ತೆ ಮೂಲಕ ವಿಂಡ್ಸ್‌ ಮ್ಯಾನರ್ ವೃತ್ತಕ್ಕೆ ತೆರಳುವ ವಾಹನ ಸವಾರರು ಶಿವಾನಂದ ಸರ್ಕಲ್‌ನಲ್ಲಿ-ನೆಹರು ಸರ್ಕಲ್‌ ಮೂಲಕ ಹೋಗಬಹುದಾಗಿದೆ.
  • ಬಿಎಚ್‌ ಇಎಲ್ ಸರ್ಕಲ್‌ನಿಂದ ಮೇಕ್ರಿ ಸರ್ಕಲ್ ಕಡೆಗೆ ಬರುವ ವಾಹನ ಸವಾರರು ಸದಾಶಿವನಗರ ಪೊಲೀಸ್ ಠಾಣೆ – ಮಾರಮ್ಮ ಸರ್ಕಲ್ – ಮಾರ್ಗೋಸ ರಸ್ತೆ ಮೂಲಕ‌ ಸಂಚರಿಸಬಹುದಾಗಿದೆ.
  • ಭಾಷ್ಯಂ ಸರ್ಕಲ್‌ನಿಂದ ಕಾವೇರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಮಲ್ಲೇಶ್ವರಂ 18ನೇ ಕ್ರಾಸ್ – ಮಾರ್ಗೋಸ ರಸ್ತೆಯ ಮೂಲಕ ಹೋಗಬಹುದು.
  • ಕ್ವೀನ್ಸ್ ವೃತ್ತದಿಂದ ಸಿ.ಟಿ.ಓ, ಕಡೆಗೆ ಬರುವ ವಾಹನ ಸವಾರರು ಸಿದ್ದಲಿಂಗಯ್ಯ ವೃತ್ತ – ಆರ್.ಆರ್.ಎಂ.ಆರ್. ರಸ್ತೆಯ ಮೂಲಕ ಸಾಗಬಹುದು.
  • ಬಾಳೇಕುಂದ್ರಿ ಜಂಕ್ಷನ್‌ನಿಂದ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ವಾಹನಗಳು ಕನ್ನಿಂಗ್ ಹ್ಯಾಂ ರಸ್ತೆ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​​​ನಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಿದ್ದು, ರೂಪಾಯಿ 64 ಕೋಟಿ ರೂ ವೆಚ್ಚದ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ಅನಾವರಣಗೊಳಿಸಲಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..